Input license here

ಇತ್ತೀಚಿನ ಪೋಸ್ಟ್‌ಗಳು

ಪಯಣಿಸುವ ವೇಳೆಯಲಿ ಬಂದು ಅಡಿಗೆರಗಿ

ಪಯಣಿಸುವ ವೇಳೆಯಲಿ ಬಂದು ಅಡಿಗೆರಗಿ
ಮುಂದೆ ನಿಂದಳು ನನ್ನ ಕೈಹಿಡಿದ ಹುಡುಗಿ
ಇನ್ನೆಂದು ಬರುವಿರೆಂದೆನ್ನ ಕೇಳಿದಳು
ಇನ್ನೊಂದು ತಿಂಗಳಿಗೆ ಎಂದು ಹೇಳಿದೆನು

ಕೆನ್ನೆ ಕೆಂಪಾಗಿರಲು ಸಂಜೆ ಮುಗಿಲಂತೆ
ಕಣ್ಣಿರಲು ತಿಳಿಬಾನ ಕಿರುತಾರೆಯಂತೆ
ವೇಣಿಯಿರಲು ವಸಂತ ಪುಷ್ಪವನದಂತೆ
ಮನಸು ಬಾರದು ನನಗೆ ಅಡಿಯನಿಡೆ ಮುಂದೆ

ಅಲ್ಲಲ್ಲಿ ನಿಂದವಳ ನೋಡುತಡಿಗಡಿಗೆ
ತೆರಳಿದೆನು ವಿರಹದಲಿ ನಿಲ್ದಾಣದೆಡೆಗೆ
ದಾರಿಯಲೆ ಕಂಡೊಬ್ಬ ಹಣ್ಣು ಮಾರುವನು
ಹೊರಟು ಹೋದುದು ಬಂಡಿ ಎಂದು ಹೇಳಿದನು
ಹಿಂದಿರುಗಿ ಬಂದೆನ್ನ ಒಂದೆ ಮಾತಿನಲಿ
ತಿಂಗಳಾಯಿತೆ ಎಂದಳೆನ್ನ ಹೊಸ ಹುಡುಗಿ

- ಕೆ. ಎಸ್. ನರಸಿಂಹಸ್ವಾಮಿಯವರು.

Post a Comment

0 Comments