Input license here

ಇತ್ತೀಚಿನ ಪೋಸ್ಟ್‌ಗಳು

ಮಾತು ಬರುವುದು ಎಂದು ಮಾತಾಡುವುದು ಬೇಡ

 ಮಾತು ಬರುವುದು ಎಂದು ಮಾತಾಡುವುದು ಬೇಡ;
ಒಂದು ಮಾತಿಗೆ ಎರಡು ಅರ್ಥವುಂಟು.
ಎದುರಿಗಿರುವವ ಕೂಡ ಮಾತ ಬಲ್ಲವ ಗೆಳೆಯ;
ಬರಿದೆ ಆಡುವ ಮಾತಿಗರ್ಥವಿಲ್ಲ.

ಕಡಲ ತಟಿಯಲಿ ತರುಣ ಬಲೆಯ ಬೀಸಿದ್ದಾನೆ;
ಮೀನು ಬೇಳುವ ತನಕ ಕಾಯ ಬೇಕು.
ಮೀನ ಹೊರೆಯನು ಹೊತು ಮನೆಗೆ ಬಂದಿದ್ದಾನೆ;
ಹುಡುಕುತ್ತಲಿಹನವನು ಮುತ್ತಿಗಾಗಿ.

ಮಾತು ಮುತ್ತೆನ್ನುವುದು ಬಲ್ಲವರ ಉಕ್ತಿ; ಬಿಡು.
ಮೀನಿನಿಂದಲು ನಮಗೆ ಲಾಭವುಂಉ.
ಮುತ್ತ ಹುಡುಕಲು ಹೋಗಿ ಮೀನತಂದಿದ್ದಾನೆ.
ಅವನ ದುಡಿಮೆಗೆ ಕೂಡ ಅರ್ಥವುಂಟು.

ಮನೆಗೆ ಬಂದಾಗವನ ಮಡದಿ ಮೆಲ್ಲನೆ ನಕ್ಕು
ಮುತ್ತಕೊಟ್ಟಳು ಅವನ ಹಸಿದ ತುಟಿಗೆ.
ಹೃದಯವನು ಕಲಕಿತ್ತು ಅವಳ ಮೌನದ ಮುತ್ತು.
ಮುತ್ತು ಸಿಕ್ಕಿತು ಎಂದು ನಕ್ಕವನು.

- ಕೆ. ಎಸ್. ನರಸಿಂಹಸ್ವಾಮಿಯವರು.

Post a Comment

0 Comments