Input license here

ಇತ್ತೀಚಿನ ಪೋಸ್ಟ್‌ಗಳು

ಆಕಾಶಕ್ಕೆದ್ದು ನಿಂತ ಪರ್ವತ ಹಿಮ ಮೌನದಲ್ಲಿ

 ಆಕಾಶಕ್ಕೆದ್ದು ನಿಂತ ಪರ್ವತ ಹಿಮ ಮೌನದಲ್ಲಿ
ಕರಾವಳಿಗೆ ಮುತ್ತನಿಡುವ ಪೆರ್ದೆರೆಗಳ ಗಾನದಲ್ಲಿ
ಬಯಲು ತುಂಬ ಹಸಿರ ದೀಪ ಹಚ್ಚಿ ಹರಿವ ನದಿಗಳಲ್ಲಿ
ನೀಲಿಯಲ್ಲಿ ಹೊಗೆಯ ಚಲ್ಲಿ ಯಂತ್ರ ಘೋಷವೇಳುವಲ್ಲಿ
ಕಣ್ಣು ಬೇರೆ, ನೋಟವೊಂದು-
ನಾವು ಭಾರತೀಯರು.

ನಾಡಿನೆಲ್ಲ ಗಡಿಗಳಲ್ಲಿ ಬಾನಿನಲ್ಲಿ ಕಡಲಿನಲ್ಲಿ
ನಮ್ಮ ಯೋಧರೆತ್ತಿ ಹಿಡಿದ ನಮ್ಮ ಧ್ವಜದ ನೆರಳಿನಲ್ಲಿ
ಒಂದೆ ನೆಲದ ತೊಟ್ಟಿಲಲ್ಲಿ ಬೆಳೆದ ನಮ್ಮ ಕೊರಲಿನಲ್ಲಿ
ನಮ್ಮ ಯುಗದ ದನಿಗಳಾಗಿ ಮೂಡಿದೆಲ್ಲ ಹಾಡಿನಲ್ಲಿ
ಭಾಷೆ ಬೇರೆ, ಭಾವವೊಂದು-
ನಾವು ಭಾರತೀಯರು.

ನಾಡಿಗಾಗಿ ತನುವ ತೆತ್ತ ಹುತಾತ್ಮರ ಸ್ಮರಣೆಯಲ್ಲಿ
ನಮ್ಮ ಕಷ್ಟದಲ್ಲು ನೆರೆಗೆ ನೆರೆಳನೀವ ಕರುಣೆಯಲ್ಲಿ
ದಾರಿ ಬಳಸಿ ಏರುವಲ್ಲಿ ಬಿರುಗಾಳಿಯೆ ಮೊಳಗುವಲ್ಲಿ
ನಮ್ಮ ಗುರಿಯ ಬೆಳಕಿನೆಡೆಗೆ ನಡೆವ ಧೀರ ಪಯಣದಲ್ಲಿ
ಎಲ್ಲೆ ಇರಲಿ, ನಾವು ಒಂದು-
ನಾವು ಭಾರತೀಯರು.

-ಎ ಎಸ್ ನರಸಿಂಹಸ್ವಾಮಿಯವರು.

Post a Comment

0 Comments