Input license here

ಇತ್ತೀಚಿನ ಪೋಸ್ಟ್‌ಗಳು

ಮೊದಲ ದಿನ ಮೌನ ಅಳುವೇ ತುಟಿಗೆ ಬಂದಂತೆ

 ಮೊದಲ ದಿನ ಮೌನ ಅಳುವೇ ತುಟಿಗೆ ಬಂದಂತೆ
ಚಿಂತೆ ಬಿಡಿ ಹೂವ ಮುಡಿದಂತೆ

ಹತ್ತು ಕಡೆ ಕಣ್ಣು ಸಣ್ಣಗೆ ದೀಪ ಉರಿದಂತೆ
ಜೀವದಲಿ ಜಾತ್ರೆ ಮುಗಿದಂತೆ

ಎರಡನೆಯ ಹಗಲು ಇಳಿಮುಖವಿಲ್ಲ ಇಷ್ಟು ನಗು
ಮೂಗುತಿಯ ಮಿಂಚು ಒಳಹೊರಗೆ
ನೀರೊಳಗೆ ವೀಣೆ ಮಿಡಿದಂತೆ ಆಡಿದ ಮಾತು
ಬೇಲಿಯಲಿ ಹಾವು ಹರಿದಂತೆ

ಮೊರನೆಯ ಸಂಜೆ ಹೆರಳಿನ ತುಂಬಾ ದಂಡೆ ಹೂ
ಹೂವಿಗೂ ಜೀವ ಬಂದಂತೆ
ಸಂಜೆಯಲಿ ರಾತ್ರಿ ಇಳಿದಂತೆ ಬೀಳುಬಾನಿಗೂ
ಹುಣ್ಣಿಮೆಯ ಹಾಲು ಹರಿದಂತೆ

- ಕೆ. ಎಸ್. ನರಸಿಂಹಸ್ವಾಮಿಯವರು.

Post a Comment

0 Comments