ಜಯ್ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ಜಯ್ ಸುಂದರ ನದಿ ವನಗಳ ನಾಡೆ,
ಜಯ ಹೇ ರಸಋಷಿಗಳ ಬೀಡೆ |ಭೂದೇವಿಯ ಮಕುಟದ ನವಮಣಿಯೆ,
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ಜನನಿಯ ಜೋಗುಳ ವೇದದ ಘೋಷ,
ಹಸುರಿನ ಗಿರಿಗಳ ಸಾಲೆ
ನಿನ್ನಯ ಕೊರಳಿನ ಮಾಲೆ,ಕಪಿಲ ಪತಂಜಲ ಗೌತಮ ಜಿನನುತ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ಶಂಕರ ರಾಮಾನುಜ ವಿದ್ಯಾರಣ್ಯ
ರನ್ನ ಷಡಕ್ಷರಿ ಪೊನ್ನ
ಪಂಪ ಲಕುಮಿಪತಿ ಜನ್ನಕುಮಾರವ್ಯಾಸರ ಮಂಗಳಧಾಮ |
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ತೈಲಪ ಹೊಯ್ಸಳರಾಳಿದ ನಾಡೆ,
ಕೃಷ್ಣ ಶರಾವತಿ ತುಂಗಾ
ಕಾವೇರಿಯ ವರರಂಗಾ.ಚೈತನ್ಯ ಪರಮಹಂಸ ವಿವೇಕರ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ |ಸರ್ವ ಜನಾಂಗದ ಶಾಂತಿಯ ತೋಟ,
ಹಿಂದು ಕ್ರೈಸ್ರ ಮುಸಲ್ಮಾನ
ಪಾರಸಿಕ ಜೈನರುದ್ಯಾನ.ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ |ಕನ್ನಡ ನುಡಿ ಕುಣಿದಾಡುವ ಗೇಹ |
ಜಯ ಹೇ ಕರ್ನಾಟಕ ಮಾತೆ |ಜಯ್ ಸುಂದರ ನದಿ ವನಗಳ ನಾಡೆ,
ಜಯ ಹೇ ರಸಋಷಿಗಳ ಬೀಡೆ |-ರಾಷ್ಟ್ರಕವಿ ಕುವೆಂಪು.
0 Comments