Input license here

ಇತ್ತೀಚಿನ ಪೋಸ್ಟ್‌ಗಳು

ಮಾನವನೆದೆಯಲಿ ಆರದೆ ಉರಿಯಲಿ

 ಮಾನವನೆದೆಯಲಿ ಆರದೆ ಉರಿಯಲಿ
ದೇವರು ಹೆಚ್ಚಿದ ದೀಪ
ರೇಗುವ ದನಿಗೂ ರಾಗವು ಒಲಿಯಲಿ
ಮೂಡಲಿ ಮಧುರಾಲಾಪ

ಕೊಲ್ಲಲ್ಲು ಎತ್ತಿದ ಕೈಗೂ ಗೊತ್ತಿದೆ
ಕೆನ್ನೆಯ ಸವರುವ ಪ್ರೀತಿ
ಇರಿಯುವ ಮುಳ್ಳಿನ ನಡುವೆಯೆ ನಗುವುದು
ಗುಲಾಬಿ ಹೂವಿನ ರೀತಿ

ಉರಿಯನು ಕಾರುವ ಆಗಸ ತಾರದೆ
ತಂಪನು ತೀಡುವ ಮಳೆಯ?
ಲಾವಾರಸವನು ಕಾರುವ ಧರೆಯೇ?
ನೀಡದೆ ಅನ್ನದ ಬೆಳೆಯ?

ಹಮ್ಮು ಬಿಮ್ಮುಗಳ ಮರುಳುಗಾಡಿನಲಿ
ಎಲ್ಲೋ ಥಣ್ಣನೆ ಚಿಲುಮೆ
ತಾಪವ ಹರಿಸಿ ಕಾಪಾಡುವುದು
ಒಳಗೇ ಸಣ್ಣಗೆ ಒಲುಮೆ.


-ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟ.

Post a Comment

0 Comments